ಸಿಂಹ ಸಂಕ್ರಮಣೋತ್ಸವ | ಯಕ್ಷಗಾನ ಬಯಲಾಟ | 17.08.2025
ದಿನಾಂಕ 17.08.2025ರಂದು “ಸಿಂಹ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.30ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ಬಯಲಾಟ. •ಸರ್ವರಿಗೂ ಆದರದ ಸ್ವಾಗತ• ಆಡಳಿತ ಮಂಡಳಿ
ದಿನಾಂಕ 17.08.2025ರಂದು “ಸಿಂಹ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.30ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ಬಯಲಾಟ. •ಸರ್ವರಿಗೂ ಆದರದ ಸ್ವಾಗತ• ಆಡಳಿತ ಮಂಡಳಿ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಚಿತ್ರಕೂಟ ಪಂಚವಟಿ ಸಹಿತ ಕಂಬಳ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿಯು ಸಂಪನ್ನಗೊಂಡಿತು.
ಶ್ರೀ ಕ್ಷೇತ್ರದಲ್ಲಿರುವ ಆಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ 26.07.2025ರಂದು ಶ್ರಾವಣ ಶನಿವಾರದ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತ ಪರ್ಯಂತ ನಿರಂತರ “ತೈಲಾಭಿಷೇಕ ಮತ್ತು ಭಜನಾ ಸಂಕೀರ್ತನೆ” ಜರಗಿತು.
ದಿನಾಂಕ 16.07.2025ರಂದು “ಕರ್ಕಾಟಕ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.00ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷ ವಾದ – ಸಂವಾದ
ದಿನಾಂಕ 15.06.2025ರಂದು “ಮಿಥುನ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.00ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ತಾಳಮದ್ದಳೆ “ಮಯೂರಧ್ವಜ”
ಶ್ರೀ ದೇವಳದಲ್ಲಿ 24.05.2025 ಪತ್ತನಾಜೆಯ ಪ್ರಯುಕ್ತ ಶ್ರೀ ಗೌತಮೇಶ್ವರನಿಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರ ರುದ್ರಾಭಿಷೇಕ, ವರುಣ+ಪರ್ಜನ್ಯ ಆರಾಧನೆ ಸಂಪನ್ನಗೊಂಡಿತು
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಮೇಳದ ಪಂಚಮ ಯಾನ ಸಮಾಪನ – 25.05.2025
ಅಗೇಲು ಸೇವೆ ಈ ವಿಶಿಷ್ಟ ಅಗೇಲು ಸೇವೆಯೆಂಬ ಶೈವಾಗಮೋಕ್ತ ತಂತ್ರೋಕ್ತ ಪೂಜಾ ವಿಧಿಯು ಶ್ರೀ ದೇವಳದಲ್ಲಿ ಮೇ 8ರಂದು ಮಧ್ಯಾಹ್ನ 4 ಗಂಟೆಯಿಂದ ನಡೆಯಲಿದೆ. ನಿರಂತರವಾಗಿ 1000 ತಂತ್ರೋಕ್ತ ರೀತ್ಯಾ ರಂಗಪೂಜೆ ನಡೆದ ದೇವಾಲಯದಲ್ಲಿ ಈ ಅಗೇಲು ಸೇವೆಯೆಂಬ ವಿಶೇಷ ಪ್ರಕ್ರಿಯೆಯನ್ನು ನಡೆಸಲು ಅವಕಾಶವಿರುತ್ತದೆ. ಅಂತೆಯೇ ನಮ್ಮೀ ದೇವಾಲಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನದಿಂದ ಇಂದಿನವರೆಗೂ ನಿರಂತರವಾಗಿ ರಂಗಪೂಜೆ ನಡೆಯುತ್ತಿದ್ದು (7300ಕ್ಕೂ ಮೇಲ್ಪಟ್ಟು) ಪ್ರತಿ ವರ್ಷ ವೈಶಾಖ ಶುದ್ಧ ಏಕಾದಶಿಯಂದು ಅಗೇಲು ಸೇವೆಯನ್ನು ಸಲ್ಲಿಸಲಾಗುತ್ತಿದೆ. ಮಹಾರಂಗಪೂಜೆಯ ವಿಸ್ತೃತ ರೂಪವಾಗಿ …
ಶ್ರೀ ದೇವಳದಲ್ಲಿ ವಾರ್ಷಿಕ ಮಹೋತ್ಸವವು ದಿನಾಂಕ 13.04.2025ರಂದು ಅಂಕುರಾರ್ಪಣೆಯಿಂದ ಮೊದಲ್ಗೊಂಡು, 14ರಂದು ಧ್ವಜಾರೋಹಣ, 18 ರಂದು ಮಹಾ ರಥೋತ್ಸವ, 19ರಂದು ಅವಭೃತ ಸ್ನಾನ, ಧ್ವಜಾವರೋಹಣ, ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆಯೊಂದಿಗೆ ಸಂಪನ್ನಗೊಳ್ಳಲಿದೆ.
ಶ್ರೀ ದೇವಳದ ಆಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ 06.04.2025ರಂದು ಶ್ರೀ ರಾಮ ನವಮಿಯ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಶ್ರೀ ರಾಮ ತಾರಕ ಮಂತ್ರ ಹೋಮ ಹಾಗೂಬೆಳಿಗ್ಗೆ 10 ಗಂಟೆಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಮಕ್ಕಳ ಯಕ್ಷ ಬಳಗ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ “ಯಕ್ಷಾರಾಧನೆ – ಹನುಮದ್ವಿಲಾಸ” ಜರಗಿತು. ನಿರ್ದೇಶನ : ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿಹಿಮ್ಮೇಳ : ಮನ್ವಿತ್ ಶೆಟ್ಟಿ ಇರಾ, ಗುರುಪ್ರಸಾದ್ ಬೋಳಿಂಜಡ್ಕ, ಪ್ರಶಾಂತ್ ಶೆಟ್ಟಿ ವಗೆನಾಡು